ಗುರುವಾರ, ಆಗಸ್ಟ್ 15, 2019

ಅರಸೀಕೆರೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಅರಸೀಕೆರೆಯಲ್ಲಿ ಸಂಭ್ರಮದ  ಸ್ವಾತಂತ್ರ್ಯ ದಿನಾಚರಣೆ

ಅರಸೀಕೆರೆ ಪಟ್ಟಣದ ಜೇನುಕಲ್ ಕ್ರೀಡಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಇಂದು ಸಂಭ್ರಮ ಸಡಗರಗಳಿಂದ 73 ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. 

ಅರಸೀಕೆರೆ ತಾಲ್ಲೂಕು ದಂಡಾಧಿಕಾರಿಗಳು ಹಾಗೂ ತಹಶೀಲ್ದಾರ್ ಆದ ಶ್ರೀ. ಸಂತೋಷ್ ಕುಮಾರ್ ರವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು.  ನಂತರ ತೆರದ ಜೀಪಿನಲ್ಲಿ ಕವಾಯತು ವೀಕ್ಷಣೆ ನಡೆಸಿದರು. ಪೊಲೀಸ್ ಇಲಾಖೆ, ಹೊಂಗಾರ್ಡ, ಎನ್.ಸಿ.ಸಿ, ಸ್ಕೌಟ್ಸ್ ಮತ್ತು ಗೈಡ್ಸ್ ಸೇರಿದಂತೆ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ಜರುಗಿತು. ಇದೇ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟಗಾರರನ್ನು, ಮಾಜಿ ಸೈನಿಕರನ್ನು ಮತ್ತು ತಾಲ್ಲೂಕಿನ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.  ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕರಾದ ಶ್ರೀ.ಕೆ.ಎಂ.ಶಿವಲಿಂಗೇಗೌಡರು ಅಧ್ಯಕ್ಷರ ಭಾಷಣ ಮಾಡಿದರು.  ನಂತರ ವಿವಿಧ ಶಾಲೆಗಳ ವಿದ್ಯಾರ್ಥಿಗಳು ನಡೆಸಿಕೊಟ್ಟ ಸಾಂಸ್ಕೃತಿಕ ಕಾರ್ಯಕ್ರಮ ಜನರ ಮನಸೂರೆಗೊಂಡಿತು. ಅರಸೀಕೆರೆ ತಾಲ್ಲೂಕಿನ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು, ಶಾಲಾ ಕಾಲೇಜು ಮುಖ್ಯಸ್ಥರು, ಪೋಷಕರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

ಕಾರ್ಯಕ್ರಮಕ್ಕೂ ಮುನ್ನ, ಅರಸೀಕೆರೆ ನಗರದ ಹೊರವಲಯದ ಕಸ್ತೂರಬಾ ಆಶ್ರಮದ ಆವರಣದಲ್ಲಿರುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಚಿತಾಭಸ್ಮ ಸಮಾಧಿ "ರಾಜ್ ಘಾಟ್" ಗೆ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಇಂದು ಬೆಳಿಗ್ಗೆ ತಹಶೀಲ್ದಾರ್ ಸಂತೋಷ್ ಕುಮಾರ್ ರವರು ಪುಷ್ಪನಮನ ಸಲ್ಲಿಸಿದರು. ಗ್ರೇಡ್ 2 ತಹಶೀಲ್ದಾರ್ ಫಾಲಾಕ್ಷ, ಶಿರಸ್ತೇದಾರ್ ಶಿವಶಂಕರ್, ರೆವೆನ್ಯೂ ಇನ್ಸ್‌ಪೆಕ್ಟರ್ ಮಂಜುನಾಥ,
ಕಸ್ತೂರಬಾ ಗಾಂಧಿ ರಾಷ್ಟ್ರೀಯ ಸ್ಮಾರಕ ಸಂಸ್ಥೆಯ ಪ್ರತಿನಿಧಿ ಉಷಾ ಅಬ್ರಾಲ್ ಹಾಗೂ ಸಂಸ್ಥೆಯ ಸಿಬ್ಬಂದಿಗಳು, ವಿದ್ಯಾರ್ಥಿಗಳು ಇದ್ದರು.

ಅರಸೀಕೆರೆ ನಗರದ ಹಾಸನ ವೃತ್ತದಲ್ಲಿರುವ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ರವರ ಪ್ರತಿಮೆಗೆ ತಹಶೀಲ್ದಾರರು ಪುಷ್ಪಹಾರ ಸಲ್ಲಿಸಿದರು.

https://youtu.be/zLUZhsYIe8o
Share:

ಸೋಮವಾರ, ಜುಲೈ 29, 2019

ಭಾನುವಾರ, ಜುಲೈ 28, 2019

ಅರಸೀಕೆರೆ ತಾಲ್ಲೂಕು ಯಳವಾರೆ ಶ್ರೀ ಹುಚ್ಚಮ್ಮದೇವಿ ಸನ್ನಿಧಿಯಲ್ಲಿ ಚಂಡಿಕಾ ಹೋಮ

ಅರಸೀಕೆರೆ ತಾಲ್ಲೂಕು ಯಳವಾರೆ ಶ್ರೀ ಹುಚ್ಚಮ್ಮದೇವಿ ಸನ್ನಿಧಿಯಲ್ಲಿ ಚಂಡಿಕಾ ಹೋಮ
ಅರಸೀಕೆರೆ ತಾಲ್ಲೂಕು ಕಸಬಾ ಹೋಬಳಿ ಯಳವಾರೆ ಗ್ರಾಮದೇವತೆ ಶ್ರೀ ಹುಚ್ಚಮ್ಮದೇವಿಯವರ ಮೂಲ ಸನ್ನಿಧಿಯಲ್ಲಿ, ಶ್ರೀ ಜೇನುಕಲ್ಲು ಸಿದ್ದೇಶ್ವರಸ್ವಾಮಿ, ಯಳವಾರೆ ಹುಚ್ಚಮ್ಮದೇವಿ, ಹಾರನಹಳ್ಳಿ ಕೋಡಮ್ಮದೇವಿ, ಚಲುವರಾಯಸ್ವಾಮಿ, ದೂತರಾಯಸ್ವಾಮಿ, ಕೆಂಚರಾಯಸ್ವಾಮಿ ದೇವರುಗಳ ಸಮ್ಮುಖದಲ್ಲಿ, ದಿನಾಂಕ 28-07-2019ನೇ ಭಾನುವಾರದಂದು ಲೋಕಕಲ್ಯಾಣಾರ್ಥವಾಗಿ ಚಂಡಿಕಾ ಹೋಮ ಮತ್ತು ನವಗ್ರಹ ಹೋಮ ಹಾಗೂ ದೇವಿಗೆ ಮಹಾಭಿಷೇಕವನ್ನು ನಡೆಸಲಾಯಿತು.
ಭಕ್ತಾಧಿಗಳಿಗೆ ತೀರ್ಥಪ್ರಸಾದ ವಿನಿಯೋಗ ಏರ್ಪಡಿಸಲಾಗಿತ್ತು.
Share:

ಶುಕ್ರವಾರ, ಜುಲೈ 26, 2019

ಆಡಿಕೃತ್ತಿಕೆ

ಅರಸೀಕೆರೆ ನಗರದ "ಆನೆ ಬೆಟ್ಟದ ಶ್ರೀ ಸುಬ್ರಹ್ಮಣ್ಯ ಸ್ವಾಮಿಯವರ" ದೇವಾಲಯದಲ್ಲಿ "ಆಡಿಕೃತ್ತಿಕೆ" ಪ್ರಯುಕ್ತ ಇಂದು (26-07-2019, ಶುಕ್ರವಾರ) ಬೆಳಿಗ್ಗೆ ಶ್ರೀಯವರಿಗೆ ಪಂಚಾಮೃತ ಅಭಿಷೇಕ, ವಿಶೇಷ ಅಲಂಕಾರ, ಭಕ್ತಾಧಿಗಳಿಗೆ ತೀರ್ಥಪ್ರಸಾದ ವಿನಿಯೋಗ ಏರ್ಪಡಿಸಲಾಗಿತ್ತು





ಕಾರ್ಯಕ್ರಮದ ವಿಡಿಯೋ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ


Share:

ಸೋಮವಾರ, ಜುಲೈ 22, 2019

ಮಾಲೇಕಲ್ಲು ತಿರುಪತಿ ಜಾತ್ರಾ ಮಹೋತ್ಸವಕ್ಕೆ ತೆರೆ

ಮಾಲೇಕಲ್ಲು ತಿರುಪತಿ ಜಾತ್ರಾ ಮಹೋತ್ಸವಕ್ಕೆ ತೆರೆ
ಅರಸೀಕೆರೆ ಮಾಲೇಕಲ್ಲು ತಿರುಪತಿ ಶ್ರೀ ಲಕ್ಷ್ಮೀವೆಂಕಟರಮಣ ಸ್ವಾಮಿಯವರ ಜಾತ್ರಾ ಮಹೋತ್ಸವದ ಹದಿನೇಳನೆಯ ಹಾಗೂ ಕಡೆಯ ದಿನವಾದ 22-07-2019 ರಂದು ರಾತ್ರಿ ತಿರುಪತಿ ಅಡ್ಡೆಕಾರರ ಸೇವಾರ್ಥದ ಅಂಗವಾಗಿ ಶ್ರೀಯವರಿಗೆ ಗರುಡೋತ್ಸವ ಹಾಗೂ ಶ್ರೀ ಕೆಂಚರಾಯಸ್ವಾಮಿ ಮಣೇವು ಜರುಗಿತು. ನಂತರ ಭಕ್ತಾಧಿಗಳಿಗೆ ಸಾಮೂಹಿಕ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.
ಕಳೆದ ಹದಿನೇಳು ದಿನಗಳಿಂದ ನಡೆಯುತ್ತಿದ್ದ ಜಾತ್ರಾ ಮಹೋತ್ಸವಕ್ಕೆ ಇಂದು ತೆರೆ ಬಿದ್ದಿತು.
ಉತ್ಸವದ ವಿಡಿಯೋವನ್ನು ಈ ಕೆಳಗಿನ ಲಿಂಕ್ ಬಳಸಿ ಯೂಟ್ಯೂಬಿನಲ್ಲಿ ವೀಕ್ಷಿಸಿ.




ಕಾರ್ಯಕ್ರಮದ ವಿಡಿಯೋ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Share:

ನಮ್ಮ ವೆಬ್ ಪುಟಗಳ ವೀಕ್ಷಣೆ ಸಂಖ್ಯೆ

ಅರಸೀಕೆರೆ.in ಆಂಡ್ರಾಯಿಡ್ ಮೊಬೈಲ್ ಆಪ್

ಅರಸೀಕೆರೆ.in ಇದೀಗ ಆಂಡ್ರಾಯಿಡ್ ಆಪ್‌ನಲ್ಲಿ

ಅರಸೀಕೆರೆಯ ಸುದ್ದಿಸಮಾಚಾರಗಳ ವೆಬ್ ಪುಟ www.arsikere.in ಇದೀಗ ಯಾವುದೇ ಬ್ರೌಸರ್ ಗಳ ಅವಶ್ಯಕತೆ ಇಲ್ಲದೇ ಆಂಡ್ರಾಯಿಡ್ ಆಪ್ ಮೂಲಕ  ಅತ್ಯಂತ ಸುಲಭವಾಗಿ ವೀಕ್ಷಿಸಬಹುದು....