ಭಾನುವಾರ, ಫೆಬ್ರವರಿ 19, 2017

ಅರಸೀಕೆರೆ ತಾಲ್ಲೂಕಿನಲ್ಲಿರುವ ಸರ್ಕಾರದ ಗೋಶಾಲೆಗಳು

ತಾಲ್ಲೂಕಿನಾದ್ಯಂತ ಮಳೆ-ಬೆಳೆ ಇಲ್ಲದೇ ಭೀಕರ ಬರದಿಂದಾಗಿ, ಗ್ರಾಮಾಂತರ ಪ್ರದೇಶದ ಜನರಿಗೆ ಕುಡಿಯುವ ನೀರಿಗೇ ಕಷ್ಟವಾಗಿರುವಂತಹ ಪರಿಸ್ಥಿತಿಯಲ್ಲಿ, ಜಾನುವಾರುಗಳನ್ನು ನಿರ್ವಹಣೆ ಮಾಡುವುದು ಅತ್ಯಂತ ತ್ರಾಸದಾಯಕವಾಗಿದೆ. ರಾಸುಗಳಿಗೆ ನೀರು, ಮೇವು ಒದಗಿಸಲು ಸಾಧ್ಯವಾಗದೇ ರೈತರು ತಮ್ಮ ಒಡನಾಡಿ ದನಕರುಗಳನ್ನು ಅನಿವಾರ್ಯವಾಗಿ ಮಾರಾಟಮಾಡುವಂತಹ ಸ್ಥಿತಿ ಉಂಟಾಗಿದೆ.

ಇಂತಹ ಪರಿಸ್ಥಿತಿಯಲ್ಲಿ ರೈತರ ಸಹಾಯಕ್ಕಾಗಿ, ಸರ್ಕಾರದ ವತಿಯಿಂದ ಅರಸೀಕೆರೆ ತಾಲ್ಲೂಕಿನಲ್ಲಿ ಹೋಬಳಿಗೆ ಒಂದರಂತೆ ಒಟ್ಟು ಐದು ಗೋಶಾಲೆಗಳನ್ನು ತೆರೆಯಲಾಗಿದೆ. ಅರಸೀಕೆರೆ ಕಸಬಾ ವ್ಯಾಪ್ತಿಯ ಬೋರನಕೊಪ್ಪಲು, ಬಾಣಾವರ, ಕಣಕಟ್ಟೆ ಹೋಬಳಿಯ ರಾಂಪುರ, ಗಂಡಸಿ ಹ್ಯಾಂಡ್ ಪೋಸ್ಟ್ ಮತ್ತು ಜಾವಗಲ್ ನಲ್ಲಿ ಒಂದೊಂದು ಗೋಶಾಲೆ ತೆರೆಯಲಾಗಿದೆ. ಇಲ್ಲಿ ರಾಸುಗಳಿಗೆ ಕುಡಿಯುವ ನೀರಿನ ವ್ಯವಸ್ಥೆ, ಪ್ರತಿ ರಾಸುಗಳಿಗೆ ದಿನವೊಂದಕ್ಕೆ ಉಚಿತವಾಗಿ ಐದು ಕೆಜಿಯಷ್ಟು ಮೇವು (ಭತ್ತದ ಹುಲ್ಲು, ಜೋಳದ ಹುಲ್ಲು ಇತ್ಯಾದಿ) ಒದಗಿಸಲಾಗುತ್ತಿದೆ. ಅನೇಕ ರೈತರುಗಳು ತಮ್ಮ ರಾಸುಗಳಿಗೆ ತಾತ್ಕಾಲಿಕ ಶೆಡ್ಡುಗಳನ್ನು ನಿರ್ಮಿಸಿ, ಅವರುಗಳೂ ರಾಸುಗಳ ಜೊತೆಯಲ್ಲೇ ಗೋಶಾಲೆಯಲ್ಲಿ ಉಳಿದುಕೊಂಡಿದ್ದಾರೆ. ಕಂದಾಯ ಇಲಾಖೆಯ ಸಿಬ್ಬಂದಿಗಳು ಹಾಗೂ ಪಶುವೈದ್ಯಕೀಯ ಇಲಾಖೆಯ ವೈದ್ಯರುಗಳ ತಂಡ ಪ್ರತಿಯೊಂದು ರಾಸುಗಳ ಆರೋಗ್ಯದ ಬಗ್ಗೆ ನಿಗಾ ವಹಿಸುತ್ತಿದ್ದಾರೆ.

ಈ ಮಧ್ಯೆ, ಕೆಲವು ಜಾನುವಾರುಗಳಿಗೆ ಸಾಂಕ್ರಾಮಿಕ ರೋಗವಾದ ಕಾಲುಬಾಯಿ ಜ್ವರ ಬಂದಿದೆ ಎಂಬ ಆತಂಕಕಾರಿ ಸುದ್ದಿ ಕೇಳಿಬಂತು. ಈಗಾಗಲೇ ಪಶುವೈದ್ಯರು ಈಕುರಿತು ಹೆಚ್ಚಿನ ಕ್ರಮಗಳನ್ನು ಕೈಗೊಂಡಿದ್ದಾರೆ, ಆದರೂ ಅವರ ಕೈಮೀರಿ ಕೆಲವು ದನಗಳಿಗೆ ಈ ರೋಗ ಹರಡಬಹುದಾದ ಸಂಭವವಿದೆ.



Share:

ಈ ವಾರದ ಜನಪ್ರಿಯ ಪೋಸ್ಟ್‌ಗಳು

ನಮ್ಮ ವೆಬ್ ಪುಟಗಳ ವೀಕ್ಷಣೆ ಸಂಖ್ಯೆ

ಅರಸೀಕೆರೆ.in ಆಂಡ್ರಾಯಿಡ್ ಮೊಬೈಲ್ ಆಪ್

ಅರಸೀಕೆರೆ.in ಇದೀಗ ಆಂಡ್ರಾಯಿಡ್ ಆಪ್‌ನಲ್ಲಿ

ಅರಸೀಕೆರೆಯ ಸುದ್ದಿಸಮಾಚಾರಗಳ ವೆಬ್ ಪುಟ www.arsikere.in ಇದೀಗ ಯಾವುದೇ ಬ್ರೌಸರ್ ಗಳ ಅವಶ್ಯಕತೆ ಇಲ್ಲದೇ ಆಂಡ್ರಾಯಿಡ್ ಆಪ್ ಮೂಲಕ  ಅತ್ಯಂತ ಸುಲಭವಾಗಿ ವೀಕ್ಷಿಸಬಹುದು....