ಭಾನುವಾರ, ಮಾರ್ಚ್ 19, 2017

ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ

ಅರಸೀಕೆರೆ ತಾಲ್ಲೂಕು ಬಂಡಿಹಳ್ಳಿ ಗ್ರಾಮದಲ್ಲಿ ಇಂದು ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಮತ್ತು ಧರ್ಮಜಾಗೃತಿ ಸಮ್ಮೇಳನ ಜರುಗಿತು.

ಬಾಳೆಹೊನ್ನೂರು  ಶ್ರೀ ರಂಭಾಪುರಿ ವೀರಸೋಮೇಶ್ವರ ಜಗದ್ಗುರುಗಳು ಕಾರ್ಯಕ್ರಮದ ದಿವ್ಯಸಾನಿಧ್ಯ ವಹಿಸಿದ್ದರು.  ಎಡೆಯೂರಿನ ರೇಣುಕ ಶಿವಾಚಾರ್ಯರು ಸಮಾರಂಭವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ನೊಣವಿನಕೆರೆ ಕರಿವೃಷಭ ಶಿವಯೋಗೀಶ್ವರ ಸ್ವಾಮಿಗಳು ವಹಿಸಿದ್ದರು. ದೊಡ್ಡಗುಣಿ ರೇವಣಸಿದ್ಧೇಶ್ವರ ಶಿವಾಚಾರ್ಯರು, ಹೊನ್ನವಳ್ಳಿ ಶಿವಪ್ರಕಾಶ ಶಿವಾಚಾರ್ಯರು, ಕುಪ್ಪೂರು ಡಾ|| ಯತೀಶ್ವರ ಶಿವಾಚಾರ್ಯರು, ತಿಪಟೂರಿನ ರುದ್ರಮುನಿಸ್ವಾಮಿಗಳು, ನುಗ್ಗೇಹಳ್ಳಿ ಮಹೇಶ್ವರ ಶಿವಾಚಾರ್ಯರು, ಮಾದಿಹಳ್ಳಿ ಚನ್ನಮಲ್ಲಿಕಾರ್ಜುನ ಶಿವಾಚಾರ್ಯರು, ದೊಡ್ಡಮೇಟಿಕುರ್ಕೆ ಶಶಿಧರ ದೇವರು, ಮಾಡಾಳು ಅಭಿನವ ಶಿವಲಿಂಗ ಸ್ವಾಮಿಗಳು ಮೊದಲಾದ ಮಠಾಧೀಶರು ಪಾಲ್ಗೊಂಡು ನುಡಿ ನಮನ ಸಲ್ಲಿಸಿದರು.  ಮಾಜಿ ಶಾಸಕರಾದ ಕೆ.ಪಿ..ಪ್ರಭುಕುಮಾರ, ಜಿ.ಎಸ್. ಪರಮೇಶ್ವರಪ್ಪ ಮತ್ತು ಜಿ.ಎಸ್. ಗುರುಸಿದ್ಧಪ್ಪ, ಎಂ. ಕಾಂತರಾಜು, ಜೆ.ಎಸ್. ಮುರುಗೇಂದ್ರಪ್ಪ, ಕೆ.ಪಿ. ಚಂದ್ರಶೇಖರ, ಜಿ.ಪಂ.ಅಧ್ಯಕ್ಷೆ ಶ್ವೇತ ದೇವರಾಜ್, ಸ್ಥ.ಯೋ.ಪ್ರಾ.ಅಧ್ಯಕ್ಷ ಜಿ.ಎಸ್.ಚಂದ್ರಶೇಖರ್, ನಿರ್ವಾಣಸ್ವಾಮಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು.

(ಚಿತ್ರ/ಮಾಹಿತಿ : ವಾರ್ತಾ ಸಂಯೋಜನಾಧಿಕಾರಿಗಳು, ರಂಭಾಪುರಿ ಪೀಠ)
(ಚಿತ್ರಗಳು : ಟಿ.ಎಸ್.ಚಂದ್ರಮೌಳಿ)




Share:

ಈ ವಾರದ ಜನಪ್ರಿಯ ಪೋಸ್ಟ್‌ಗಳು

ನಮ್ಮ ವೆಬ್ ಪುಟಗಳ ವೀಕ್ಷಣೆ ಸಂಖ್ಯೆ

ಅರಸೀಕೆರೆ.in ಆಂಡ್ರಾಯಿಡ್ ಮೊಬೈಲ್ ಆಪ್

ಅರಸೀಕೆರೆ.in ಇದೀಗ ಆಂಡ್ರಾಯಿಡ್ ಆಪ್‌ನಲ್ಲಿ

ಅರಸೀಕೆರೆಯ ಸುದ್ದಿಸಮಾಚಾರಗಳ ವೆಬ್ ಪುಟ www.arsikere.in ಇದೀಗ ಯಾವುದೇ ಬ್ರೌಸರ್ ಗಳ ಅವಶ್ಯಕತೆ ಇಲ್ಲದೇ ಆಂಡ್ರಾಯಿಡ್ ಆಪ್ ಮೂಲಕ  ಅತ್ಯಂತ ಸುಲಭವಾಗಿ ವೀಕ್ಷಿಸಬಹುದು....