ಭಾನುವಾರ, ಮಾರ್ಚ್ 12, 2017

ಅರಸೀಕೆರೆ ಕೋಡಿಹಳ್ಳಿಬಳಿ ರಸ್ತೆ ಅಪಘಾತ

ಅರಸೀಕೆರೆ ಪಟ್ಟಣದ ಹೊರವಲಯದಲ್ಲಿರುವ ಕೋಡಿಹಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 206 ರಲ್ಲಿ ಭಾನುವಾರ ಸಂಜೆ 4.15 ರ ಸಮಯದಲ್ಲಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ಹಾಗೂ ಮಾರುತಿ ಸ್ವಿಫ್ಟ್ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಓರ್ವ ವ್ಯಕ್ತಿ ಮೃತಪಟ್ಟು ಮತ್ತಿಬ್ಬರು ಗಾಯಗೊಂಡ ಘಟನೆ ನಡೆದಿದೆ. ಶಿವಮೊಗ್ಗದಿಂದ ಬೆಂಗಳೂರಿಗೆ ಹೊರಟಿದ್ದ ಕುಣಿಗಲ್ ಡಿಪೋ ಬಸ್ಸು ಮತ್ತು ತಿಪಟೂರು ಕಡೆಯಿಂದ ಅರಸೀಕೆರೆಗೆ ಬರುತ್ತಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿದೆ.

ತುಮಕೂರು ಜಿಲ್ಲೆ ಕಿಬ್ಬನಹಳ್ಳಿಕ್ರಾಸ್ ಬಳಿಯ ಬಿಳಿಗೆರೆ ವಾಸಿಯಾದ ಬಸವರಾಜ (50 ವರ್ಷ) ಮೃತಪಟ್ಟವರು. ಇವರ ಜೊತೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಶಿವಣ್ಣ (50 ವರ್ಷ) ಮತ್ತು ಲಿಂಗರಾಜು (35 ವರ್ಷ) ಇವರುಗಳಿಗೆ ಗಾಯವಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಹಾಸನಕ್ಕೆ ಕಳಿಸಿಕೊಡಲಾಗಿದೆ. ಇವರಪೈಕಿ ಶಿವಣ್ಣನವರ ಪರಿಸ್ಥಿತಿ ಗಂಭೀರವಾಗಿದೆ.

ಅರಸೀಕೆರೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





Share:

ಈ ವಾರದ ಜನಪ್ರಿಯ ಪೋಸ್ಟ್‌ಗಳು

ನಮ್ಮ ವೆಬ್ ಪುಟಗಳ ವೀಕ್ಷಣೆ ಸಂಖ್ಯೆ

ಅರಸೀಕೆರೆ.in ಆಂಡ್ರಾಯಿಡ್ ಮೊಬೈಲ್ ಆಪ್

ಅರಸೀಕೆರೆ.in ಇದೀಗ ಆಂಡ್ರಾಯಿಡ್ ಆಪ್‌ನಲ್ಲಿ

ಅರಸೀಕೆರೆಯ ಸುದ್ದಿಸಮಾಚಾರಗಳ ವೆಬ್ ಪುಟ www.arsikere.in ಇದೀಗ ಯಾವುದೇ ಬ್ರೌಸರ್ ಗಳ ಅವಶ್ಯಕತೆ ಇಲ್ಲದೇ ಆಂಡ್ರಾಯಿಡ್ ಆಪ್ ಮೂಲಕ  ಅತ್ಯಂತ ಸುಲಭವಾಗಿ ವೀಕ್ಷಿಸಬಹುದು....