ಶನಿವಾರ, ಏಪ್ರಿಲ್ 22, 2017

ಅರಸೀಕೆರೆ ಬಳಿ ಭೀಕರ ರಸ್ತೆ ಅಪಘಾತ – ಸ್ಥಳದಲ್ಲಿಯೇ ಇಬ್ಬರ ಸಾವು

Arsikere :

ಅರಸೀಕೆರೆ ತಾಲ್ಲೂಕು ಕಸಬಾ ಹೋಬಳಿ ರಾಮಸಾಗರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 206 ರಲ್ಲಿ ಶನಿವಾರ ಬೆಳಿಗ್ಗೆ ಸುಮಾರು 8 ಗಂಟೆಯ ಸಮಯದಲ್ಲಿ ಟಾಟಾ ವಿನ್ಜರ್ ವ್ಯಾನ್ ಮತ್ತು ಮಾರುತಿ ಆಲ್ಟೋ ಕಾರಿನ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ್ದರಿಂದ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಜರುಗಿದೆ. 


ಉಡುಪಿಯಿಂದ ಬೆಂಗಳೂರಿಗೆ ಹೋಗುತ್ತಿದ್ದ ಮಾರುತಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಬೆಂಗಳೂರಿನ ದಾಸನಪುರದ ರಂಗ (27 ವರ್ಷ) ಮತ್ತು ಗೋವಿಂದ (26 ವರ್ಷ) ಇಬ್ಬರೂ ಸ್ಥಳದಲ್ಲಿಯೇ ಮೃತಪಟ್ಟಿರುತ್ತಾರೆ. ಇದೇ ಕಾರಿನಲ್ಲಿದ್ದ ದಯಾನಂದ ಹಾಗೂ ಮಂಜೇಗೌಡ ಎಂಬುವರಿಗೆ ತೀವ್ರಸ್ವರೂಪದ ಗಾಯವಾಗಿದೆ.  ಟಾಟಾ ವ್ಯಾನಿನ ಚಾಲಕರಿಗೂ ಗಂಭೀರ ಗಾಯಗಳಾಗಿದ್ದು  ಇವರುಗಳಿಗೆ ಅರಸೀಕೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕಳಿಸಿಕೊಡಲಾಗಿದೆ.

ದುರ್ಘಟನೆ ಸಂಭವಿಸಿದ್ದರಿಂದ ರಾಷ್ಟ್ರೀಯ ಹೆದ್ದಾರಿ 206 ರಲ್ಲಿ ಕೆಲವು ನಿಮಿಷಗಳ ಕಾಲ ವಾಹನಗಳ ಸಂಚಾರಕ್ಕೆ ತೊಂದರೆಯಾಗಿತ್ತು.  ಅಪಘಾತಕ್ಕೊಳಗಾಗಿದ್ದ ವಾಹನಗಳನ್ನು ಪೊಲೀಸರು ತೆರವುಗೊಳಿಸಿ ಸಂಚಾರವನ್ನು ಸುಗಮಗೊಳಿಸಿದರು.   ಅರಸೀಕೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

(ಚಿತ್ರ/ಮಾಹಿತಿ : ಅರಸೀಕೆರೆ ಗ್ರಾಮಾಂತರ ಪೊಲೀಸ್ ಇಲಾಖೆ)







Share:

ಈ ವಾರದ ಜನಪ್ರಿಯ ಪೋಸ್ಟ್‌ಗಳು

ನಮ್ಮ ವೆಬ್ ಪುಟಗಳ ವೀಕ್ಷಣೆ ಸಂಖ್ಯೆ

ಅರಸೀಕೆರೆ.in ಆಂಡ್ರಾಯಿಡ್ ಮೊಬೈಲ್ ಆಪ್

ಅರಸೀಕೆರೆ.in ಇದೀಗ ಆಂಡ್ರಾಯಿಡ್ ಆಪ್‌ನಲ್ಲಿ

ಅರಸೀಕೆರೆಯ ಸುದ್ದಿಸಮಾಚಾರಗಳ ವೆಬ್ ಪುಟ www.arsikere.in ಇದೀಗ ಯಾವುದೇ ಬ್ರೌಸರ್ ಗಳ ಅವಶ್ಯಕತೆ ಇಲ್ಲದೇ ಆಂಡ್ರಾಯಿಡ್ ಆಪ್ ಮೂಲಕ  ಅತ್ಯಂತ ಸುಲಭವಾಗಿ ವೀಕ್ಷಿಸಬಹುದು....