ಬುಧವಾರ, ಮೇ 24, 2017

ಅರಸೀಕೆರೆ ಬಳಿ ರಸ್ತೆ ಅಪಘಾತ - 1 ಸಾವು, 20 ಜನರಿಗೆ ಗಾಯ

Accident near Arsikere - 1 Died, 20 injured


ಗೋಕರ್ಣದಿಂದ ಬೆಂಗಳೂರಿಗೆ ಹೋಗುತ್ತಿದ್ದ ಶ್ರೀಕುಮಾರ್ ಟ್ರಾವಲ್ಸ್ ಗೆ ಸೇರಿದ ಖಾಸಗಿ ಸಾರಿಗೆ ಬಸ್ಸು ಅರಸೀಕೆರೆ ಕಸಬಾ ಹೋಬಳಿ ಕಲ್ಲನಾಯ್ಕನಹಳ್ಳಿ ಗೇಟ್ ಬಳಿ (ಕಾಫಿ ಡೇ ಹತ್ತಿರ) ರಾಷ್ಟ್ರೀಯ ಹೆದ್ದಾರಿ 206 ರಲ್ಲಿ ಇಂದು ಮುಂಜಾನೆ ಸುಮಾರು 4 ಗಂಟೆಯ ಸಮಯದಲ್ಲಿ ರಸ್ತೆಬದಿಯಿದ್ದ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಬಸ್ ಚಾಲಕ ಸಿದ್ದಾಪುರ ಮೂಲದ ಮಂಜುನಾಥ ನಾಯಕ್ (38 ವರ್ಷ) ಸ್ಥಳದಲ್ಲೇ ಮೃತಪಟ್ಟಿರುತ್ತಾರೆ.  ಬಸ್ಸಿನಲ್ಲಿದ್ದ 20 ಜನ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಅರಸೀಕೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಮತ್ತು  ಬೆಂಗಳೂರಿಗೆ ಕಳಿಸಿಕೊಡಲಾಗಿದೆ.

ಈ ಅಪಘಾತಕ್ಕೆ ಬಸ್ಸಿನ ಚಾಲಕರಿಗೆ ನಿದ್ರೆ ಮಂಪರು ಕಾರಣ ಎಂದು ಊಹಿಸಲಾಗಿದೆ.  ಬಸ್ಸು ಸಂಪೂರ್ಣವಾಗಿ ರಸ್ತೆಯ ಬಲಭಾಗಕ್ಕೆ ಬಂದು ಮರಕ್ಕೆ ಗುದ್ದಿದೆ.  ಬಸ್ ಡಿಕ್ಕಿ ಹೊಡೆದದ್ದರಿಂದ ರಸ್ತೆಬದಿಯ ಮರ ಸಂಪೂರ್ಣ ಬುಡಮೇಲಾಗಿದೆ ಎಂದರೆ, ಬಸ್ಸಿನ ವೇಗ ಎಷ್ಟಿರಬಹುದೆಂದು ಅಂದಾಜಿಸಬಹುದು.

ಅರಸೀಕೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

(ಚಿತ್ರ ಮಾಹಿತಿ : ಪೊಲೀಸ್ ಇಲಾಖೆ, ಅರಸೀಕೆರೆ)

ಅರಸೀಕೆರೆ ಬಳಿ ರಸ್ತೆ ಅಪಘಾತ - 1 ಸಾವು, 20 ಜನರಿಗೆ ಗಾಯ

ಅರಸೀಕೆರೆ ಬಳಿ ರಸ್ತೆ ಅಪಘಾತ - 1 ಸಾವು, 20 ಜನರಿಗೆ ಗಾಯ

ಅರಸೀಕೆರೆ ಬಳಿ ರಸ್ತೆ ಅಪಘಾತ - 1 ಸಾವು, 20 ಜನರಿಗೆ ಗಾಯ


ಅರಸೀಕೆರೆ ಬಳಿ ರಸ್ತೆ ಅಪಘಾತ - 1 ಸಾವು, 20 ಜನರಿಗೆ ಗಾಯ

Share:

ನಮ್ಮ ವೆಬ್ ಪುಟಗಳ ವೀಕ್ಷಣೆ ಸಂಖ್ಯೆ

ಅರಸೀಕೆರೆ.in ಆಂಡ್ರಾಯಿಡ್ ಮೊಬೈಲ್ ಆಪ್

ಅರಸೀಕೆರೆ.in ಇದೀಗ ಆಂಡ್ರಾಯಿಡ್ ಆಪ್‌ನಲ್ಲಿ

ಅರಸೀಕೆರೆಯ ಸುದ್ದಿಸಮಾಚಾರಗಳ ವೆಬ್ ಪುಟ www.arsikere.in ಇದೀಗ ಯಾವುದೇ ಬ್ರೌಸರ್ ಗಳ ಅವಶ್ಯಕತೆ ಇಲ್ಲದೇ ಆಂಡ್ರಾಯಿಡ್ ಆಪ್ ಮೂಲಕ  ಅತ್ಯಂತ ಸುಲಭವಾಗಿ ವೀಕ್ಷಿಸಬಹುದು....