ಗುರುವಾರ, ಆಗಸ್ಟ್ 24, 2017

ಅರಸೀಕೆರೆ ತಾಲ್ಲೂಕು ಮಾಡಾಳು ಶ್ರೀ ಸ್ವರ್ಣಗೌರಿ ದೇವಿಯ ಪ್ರತಿಷ್ಠಾಪನೆ

Arsikere


ಅರಸೀಕೆರೆ ತಾಲ್ಲೂಕು ಕಣಕಟ್ಟೆ ಹೋಬಳಿ ಮಾಡಾಳು ಗ್ರಾಮದಲ್ಲಿ ಶ್ರೀ ಸ್ವರ್ಣಗೌರಿ ದೇವಿಯ ಪ್ರತಿಷ್ಠಾಪನೆ ಸಂಭ್ರಮದಿಂದ ಜರುಗಿತು.  ಲಿಂಗೈಕ್ಯ ಶಿವಲಿಂಗಸ್ವಾಮಿಯವರು ನೀಡಿರುವ ಮೂಗುತಿಯನ್ನು ಹಾರನಹಳ್ಳಿ ಸುಕ್ಷೇತ್ರ ಕೋಡಿಮಠದ ಶ್ರೀಶ್ರೀಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿಗಳವರು ಇಂದು ಬೆಳಿಗ್ಗೆ ಬಾವಿಯ ಬಳಿ ಪೂಜಿಸಿದ ನಂತರ ಗೌರಮ್ಮನವರಿಗೆ ತೊಡಿಸಲಾಯಿತು.  ಮಂಗಳ ವಾದ್ಯಗಳೊಡನೆ ಅಮ್ಮನವರನ್ನು  ಉತ್ಸವದಲ್ಲಿ ದೇವಾಲಯಕ್ಕೆ ತರಲಾಯಿತು.  ಅಲ್ಲಿ ಸ್ವಾಮೀಜಿಯವರ ಸಮ್ಮುಖದಲ್ಲಿ ಶ್ರೀ ಸ್ವರ್ಣಗೌರಿಯನ್ನು ಪ್ರತಿಷ್ಠಾಪನೆ ಮಾಡಲಾಯಿತು.  ಸಹಸ್ರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ನೆರದಿದ್ದರು.  ಭಕ್ತಾಧಿಗಳಿಗೆ ದೇವಸ್ಥಾನದ ವತಿಯಿಂದ ಅನ್ನದಾಸೋಹದ ವ್ಯವಸ್ಥೆ ಮಾಡಲಾಗಿದೆ.  ಅರಸೀಕೆರೆ ಗ್ರಾಮಾಂತರ ವೃತ್ತ ನಿರೀಕ್ಷಕರ ನೇತೃತ್ವದಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.


ಮಾಡಾಳು ಶ್ರೀ ಸ್ವರ್ಣಗೌರಿ ದೇವಿಯವರ ವಿಸರ್ಜನಾ ಮಹೋತ್ಸವವು ಸೆಪ್ಟೆಂಬರ್ 2, 2017 ಶನಿವಾರದಂದು ಸಂಜೆ 6 ಗಂಟೆಗೆ ಜರುಗಲಿದೆ.







Share:

ಈ ವಾರದ ಜನಪ್ರಿಯ ಪೋಸ್ಟ್‌ಗಳು

ನಮ್ಮ ವೆಬ್ ಪುಟಗಳ ವೀಕ್ಷಣೆ ಸಂಖ್ಯೆ

ಅರಸೀಕೆರೆ.in ಆಂಡ್ರಾಯಿಡ್ ಮೊಬೈಲ್ ಆಪ್

ಅರಸೀಕೆರೆ.in ಇದೀಗ ಆಂಡ್ರಾಯಿಡ್ ಆಪ್‌ನಲ್ಲಿ

ಅರಸೀಕೆರೆಯ ಸುದ್ದಿಸಮಾಚಾರಗಳ ವೆಬ್ ಪುಟ www.arsikere.in ಇದೀಗ ಯಾವುದೇ ಬ್ರೌಸರ್ ಗಳ ಅವಶ್ಯಕತೆ ಇಲ್ಲದೇ ಆಂಡ್ರಾಯಿಡ್ ಆಪ್ ಮೂಲಕ  ಅತ್ಯಂತ ಸುಲಭವಾಗಿ ವೀಕ್ಷಿಸಬಹುದು....