ಶನಿವಾರ, ಆಗಸ್ಟ್ 26, 2017

ಅರಸೀಕೆರೆಯಲ್ಲಿ ಗಣೇಶನ ವಿಸರ್ಜನೆ ಹೀಗೆ ನಡೆಯುತ್ತಿದೆ

Arsikere


ಬರಪೀಡಿತ ಅರಸೀಕೆರೆ ತಾಲ್ಲೂಕಿನಲ್ಲಿ ಎಲ್ಲ ಕೆರೆ ಕಟ್ಟೆಗಳೂ ಖಾಲಿಯಾಗಿವೆ, ಈ ಸಂದರ್ಭದಲ್ಲಿ ಅರಸೀಕೆರೆ ಪಟ್ಟಣದಲ್ಲಿ ಗಣೇಶ ವಿಸರ್ಜನೆ ಮಾಡಲು ನೀರಿರುವ ಒಂದು ಜಾಗವಿಲ್ಲ.  ಹೀಗಾಗಿ ಕೆಲವರು ತಮ್ಮ ತಮ್ಮ ಮನೆಯಲ್ಲಿ ಬಕೇಟಿನಲ್ಲಿ ಗಣೇಶನನ್ನು ವಿಸರ್ಜಿಸುತ್ತಿದ್ದಾರೆ. ಇನ್ನು ಕೆಲವು ಸಾರ್ವಜನಿಕ ಗಣೇಶ ಮೂರ್ತಿಗಳನ್ನು ವಿಸರ್ಜಿಸಲು ಸಮಸ್ಯೆ ಉಂಟಾಗಿರುವ ಹಿನ್ನೆಲೆಯಲ್ಲಿ, ಶಾಸಕರಾದ ಕೆ.ಎಂ.ಶಿವಲಿಂಗೇಗೌಡರು ವಿಶೇಷ ಕಾಳಜಿ ವಹಿಸಿ, ಅರಸೀಕೆರೆ ನಗರಸಭೆಯ ಅಧ್ಯಕ್ಷರು ಮತ್ತು ಸದಸ್ಯರುಗಳ ನೇತೃತ್ವದಲ್ಲಿ ಪಟ್ಟಣದ ಕಂತೇನಹಳ್ಳಿ ದೊಡ್ಡಕೆರೆಯಲ್ಲಿ ಸುಮಾರು 15 ಅಡಿ ಆಳದ ಒಂದು ದೊಡ್ಡ ಹೊಂಡವನ್ನು ತುರ್ತಾಗಿ ನಿರ್ಮಿಸಿ ಅದಕ್ಕೆ ಬೋರ್ ವೆಲ್ ಮೂಲಕ ನೀರನ್ನು ಸರಬರಾಜು ಮಾಡಿ ಸಾರ್ವಜನಿಕರಿಗೆ ಗಣೇಶ ವಿಸರ್ಜನೆಗೆ ಅವಕಾಶ ಮಾಡಿದ್ದಾರೆ. 


ಈ ಬರಗಾಲ ಹೀಗೆ ಮುಂದುವರಿದರೆ, ಮುಂದೆ ಗಣೇಶ ವಿಸರ್ಜನೆಗೆ ಬೋರ್ ವೆಲ್ ನೀರೂ ಕೂಡ ದೊರಕುವುದು ಕಷ್ಟವಾಗುತ್ತದೆ.  ಆಗ ಗುಂಡಿತೋಡಿ ಗಣೇಶನನ್ನು ಮಣ್ಣಿನಿಂದ ಮುಚ್ಚಬೇಕಾಗಬಹುದು.  ದೈವ ಕೃಪೆಯಿಂದ ತಾಲ್ಲೂಕಿನಲ್ಲಿ ಉತ್ತಮ ಮಳೆಯಾದಲ್ಲಿ ಮಾತ್ರ ಪರಿಸ್ಥಿತಿ ಸುಧಾರಿಸಬಹುದು. 


Share:

ಈ ವಾರದ ಜನಪ್ರಿಯ ಪೋಸ್ಟ್‌ಗಳು

ನಮ್ಮ ವೆಬ್ ಪುಟಗಳ ವೀಕ್ಷಣೆ ಸಂಖ್ಯೆ

ಅರಸೀಕೆರೆ.in ಆಂಡ್ರಾಯಿಡ್ ಮೊಬೈಲ್ ಆಪ್

ಅರಸೀಕೆರೆ.in ಇದೀಗ ಆಂಡ್ರಾಯಿಡ್ ಆಪ್‌ನಲ್ಲಿ

ಅರಸೀಕೆರೆಯ ಸುದ್ದಿಸಮಾಚಾರಗಳ ವೆಬ್ ಪುಟ www.arsikere.in ಇದೀಗ ಯಾವುದೇ ಬ್ರೌಸರ್ ಗಳ ಅವಶ್ಯಕತೆ ಇಲ್ಲದೇ ಆಂಡ್ರಾಯಿಡ್ ಆಪ್ ಮೂಲಕ  ಅತ್ಯಂತ ಸುಲಭವಾಗಿ ವೀಕ್ಷಿಸಬಹುದು....