ಶನಿವಾರ, ಸೆಪ್ಟೆಂಬರ್ 2, 2017

ಮಾಡಾಳು ಶ್ರೀ ಸ್ವರ್ಣಗೌರಿ ದೇವಿಯ ವಿಸರ್ಜನಾ ಮಹೋತ್ಸವ

Arsikere


ಅರಸೀಕೆರೆ ತಾಲ್ಲೂಕು ಮಾಡಾಳು ಗ್ರಾಮದಲ್ಲಿ ಆಗಸ್ಟ್ 24 ರಂದು ಪ್ರತಿಷ್ಠಾಪಿಸಿದ್ದ ಶ್ರೀ ಸ್ವರ್ಣಗೌರಿ ದೇವಿಯ ವಿಸರ್ಜನಾ ಮಹೋತ್ಸವವು ಇಂದು (ಸೆಪ್ಟೆಂಬರ್ 2, ಶನಿವಾರ) ಸಕಲ ಧಾರ್ಮಿಕ ವಿಧಿವಿಧಾನಗಳೊಡನೆ ಭಕ್ತ ಜನಸಾಗರದ ನಡುವೆ ವಿಜೃಂಭಣೆಯಿಂದ ಜರುಗಿತು.  ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಬೆಳಗಿನ ಜಾವದಿಂದಲೇ ಪ್ರಾರಂಭಗೊಂಡವು, ದೇವಾಲಯದ ಮುಂಭಾಗದಲ್ಲಿ ನಿರ್ಮಿಸಿದ್ದ ಚಂದ್ರ ಮಂಡಲಕ್ಕೆ ಸ್ವರ್ಣಗೌರಿ ದೇವಿಯನ್ನು ಮಂಗಳ ವಾದ್ಯಗಳೊಡನೆ ಮೆರವಣಿಗೆಯಲ್ಲಿ ಕರೆತರಲಾಯಿತು, ಅಲ್ಲಿ ಸಹಸ್ರಾರು ಭಕ್ತಾಧಿಗಳು ಗುಗ್ಗುಳ ಸೇವೆಯನ್ನು ಮಾಡಿದರು.  ಹಾಗೂ ಹರಕೆ ಹೊತ್ತಿದ್ದ ಭಕ್ತರು ದಿಂಡುರುಳು ಸೇವೆಯನ್ನು ಸಮರ್ಪಿಸಿದರು.  ನಂತರ ಗ್ರಾಮದ ಪ್ರತಿ ಮನೆ ಮನೆಗೆ ದೇವಿಯವರ ಉತ್ಸವ ತೆರಳಿತು, ಗ್ರಾಮಸ್ಥರು ದೇವಿಗೆ ಮಡಿಲಕ್ಕಿ ಸಮರ್ಪಿಸಿ ಧನ್ಯತೆಯನ್ನು ಹೊಂದಿದರು.

ಸಂಜೆ 5.30ಕ್ಕೆ ಕಲ್ಯಾಣಿಯ ಬಳಿಗೆ ಮೆರವಣಿಗೆ ಆಗಮಿಸಿತು. ಅರಸೀಕೆರೆ ಸುಕ್ಷೇತ್ರ ಕೋಡಿಮಠ ಪೀಠಾಧೀಶರಾದ ಶ್ರೀಶ್ರೀಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿಗಳು ಮತ್ತು  ಕುಪ್ಪೂರು ಗದ್ದುಗೆ ಮಠದ ಶ್ರೀಶ್ರೀಶ್ರೀ ಡಾ.ಯತೀಶ ಶಿವಾಚಾರ್ಯ ಸ್ವಾಮೀಜಿ ರವರುಗಳ ದಿವ್ಯ ಉಪಸ್ಥಿತಿಯಲ್ಲಿ ಶ್ರೀ ಸ್ವರ್ಣಗೌರಿ ಅಮ್ಮನವರಿಗೆ ಮಂಗಳಾರತಿ ಮಾಡಲಾಯಿತು.  ಕಲ್ಯಾಣಿಯ ಸುತ್ತಲೂ ಕರ್ಪೂರವನ್ನು ಹಚ್ಚುತ್ತಿದ್ದಂತೆ ಸ್ವರ್ಣಗೌರಿ ದೇವಿಯ ವಿಸರ್ಜನೆಯನ್ನು ನೆರವೇರಿಸಲಾಯಿತು.  ವಿಸರ್ಜನಾ ಮಹೋತ್ಸವಕ್ಕೆ ಆಗಮಿಸಿದ್ದ ಎಲ್ಲ ಭಕ್ತಾಧಿಗಳಿಗೆ ಅನ್ನದಾಸೋಹ ವ್ಯವಸ್ತೆ ಮಾಡಲಾಗಿತ್ತು.


ಅರಸೀಕೆರೆ ಗ್ರಾಮಾಂತರ ವೃತ್ತ ನಿರೀಕ್ಷಕ ಸಿದ್ದರಾಮೇಶ್ವರ್ ರವರ ನೇತೃತ್ವದಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.  ಅರಸೀಕೆರೆಯಿಂದ ಮಾಡಾಳಿಗೆ ಹೋಗಿಬರಲು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವತಿಯಿಂದ ವಿಶೇಷ ಬಸ್ ಸೌಕರ್ಯ ಒದಗಿಸಲಾಗಿತ್ತು.  












Share:

ನಮ್ಮ ವೆಬ್ ಪುಟಗಳ ವೀಕ್ಷಣೆ ಸಂಖ್ಯೆ

ಅರಸೀಕೆರೆ.in ಆಂಡ್ರಾಯಿಡ್ ಮೊಬೈಲ್ ಆಪ್

ಅರಸೀಕೆರೆ.in ಇದೀಗ ಆಂಡ್ರಾಯಿಡ್ ಆಪ್‌ನಲ್ಲಿ

ಅರಸೀಕೆರೆಯ ಸುದ್ದಿಸಮಾಚಾರಗಳ ವೆಬ್ ಪುಟ www.arsikere.in ಇದೀಗ ಯಾವುದೇ ಬ್ರೌಸರ್ ಗಳ ಅವಶ್ಯಕತೆ ಇಲ್ಲದೇ ಆಂಡ್ರಾಯಿಡ್ ಆಪ್ ಮೂಲಕ  ಅತ್ಯಂತ ಸುಲಭವಾಗಿ ವೀಕ್ಷಿಸಬಹುದು....