ಗುರುವಾರ, ಜನವರಿ 4, 2018

ಅರಸೀಕೆರೆಯಲ್ಲಿ ಮುಖ್ಯಮಂತ್ರಿಗಳಿಂದ ವಿವಿಧ ಕಾಮಗಾರಿಗಳ ಉದ್ಘಾಟನೆ

ಅರಸೀಕೆರೆಯಲ್ಲಿ ಮುಖ್ಯಮಂತ್ರಿಗಳಿಂದ ವಿವಿಧ ಕಾಮಗಾರಿಗಳ ಉದ್ಘಾಟನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಳಿಗ್ಗೆ ಅರಸೀಕೆರೆ ತಾಲ್ಲೂನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದರು. ಇದೇ ಸಂದರ್ಭದಲ್ಲಿ ವಿವಿಧ ಯೋಜನೆಗಳಡಿ ನೆರವು ಪಡೆಯಲಿರುವ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿದರು.

ಇಂದು ಬೆಳಗ್ಗೆ 11.45 ಕ್ಕೆ ಹೆಲಿಕಾಪ್ಟರಿನಲ್ಲಿ ಅರಸೀಕೆರೆ ಜೇನುಕಲ್ ಕ್ರೀಡಾಂಗಣದಲ್ಲಿ ನಿರ್ಮಿಸಿರುವ ಹೆಲಿಪ್ಯಾಡ್ ಗೆ ಆಗಮಿಸದ ಮುಖ್ಯಮಂತ್ರಿಗಳಿಗೆ ಹಾಸನ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಗೌರವ ಸಮರ್ಪಣೆ ನೀಡಲಾಯಿತು.   ನಂತರ, ಪಟ್ಟಣದ ಬಸವರಾಜೇಂದ್ರ ಪ್ರೌಢಶಾಲಾ ಆವರಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದರು.

ಕಾರ್ಯಕ್ರಮದಲ್ಲಿ, ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಎ.ಮಂಜು, ಅರಸೀಕೆರೆ ಶಾಸಕರಾದ ಕೆ.ಎಂ.ಶಿವಲಿಂಗೇಗೌಡರು ಹಾಗೂ ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು ಹಾಜರಿದ್ದರು.

















Share:

ಈ ವಾರದ ಜನಪ್ರಿಯ ಪೋಸ್ಟ್‌ಗಳು

ನಮ್ಮ ವೆಬ್ ಪುಟಗಳ ವೀಕ್ಷಣೆ ಸಂಖ್ಯೆ

ಅರಸೀಕೆರೆ.in ಆಂಡ್ರಾಯಿಡ್ ಮೊಬೈಲ್ ಆಪ್

ಅರಸೀಕೆರೆ.in ಇದೀಗ ಆಂಡ್ರಾಯಿಡ್ ಆಪ್‌ನಲ್ಲಿ

ಅರಸೀಕೆರೆಯ ಸುದ್ದಿಸಮಾಚಾರಗಳ ವೆಬ್ ಪುಟ www.arsikere.in ಇದೀಗ ಯಾವುದೇ ಬ್ರೌಸರ್ ಗಳ ಅವಶ್ಯಕತೆ ಇಲ್ಲದೇ ಆಂಡ್ರಾಯಿಡ್ ಆಪ್ ಮೂಲಕ  ಅತ್ಯಂತ ಸುಲಭವಾಗಿ ವೀಕ್ಷಿಸಬಹುದು....