ಶುಕ್ರವಾರ, ನವೆಂಬರ್ 9, 2018

ಗಣಪತಿ ವಿಸರ್ಜನಾ ಮಹೋತ್ಸವಕ್ಕೆ ಚಾಲನೆ

ಗಣಪತಿ ವಿಸರ್ಜನಾ ಮಹೋತ್ಸವಕ್ಕೆ ಚಾಲನೆ

ಅರಸೀಕೆರೆ ಶಾಸಕರಾದ ಶ್ರೀ ಕೆ.ಎಂ.ಶಿವಲಿಂಗೇಗೌಡರು ಶ್ರೀ ಪ್ರಸನ್ನ ಗಣಪತಿಯವರ ವಿಗ್ರಹವನ್ನು ಸಾಂಕೇತಿಕವಾಗಿ ಜರುಗಿಸುವ ಮೂಲಕ ಎರಡು ದಿನಗಳ ವಿಸರ್ಜನಾ ಮಹೋತ್ಸವಕ್ಕೆ ಚಾಲನೆ ನೀಡಿದರು. ನೂರಾರು ಭಕ್ತರು ಈ ಕಾರ್ಯಕ್ಕೆ ಸಹಕರಿಸಿದರು.

ನಂತರ, ವಾಚನಾಲಯ ರಸ್ತೆಯಲ್ಲಿ ಅರಸೀಕೆರೆ ಶಾಸಕ ಶ್ರೀ. ಕೆ.ಎಂ. ಶಿವಲಿಂಗೇಗೌಡ ಹಾಗೂ ವಿವಿಧ ಸಮಾಜದ ಮುಖಂಡರುಗಳು ಈಡುಗಾಯಿ ಸೇವೆ ಮಾಡುವುದರ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು.
ವಿವಿಧ ಸಮಾಜ, ಸಂಸ್ಥೆಗಳಿಂದ ಸಾರ್ವಜನಿಕರಿಗೆ ಪ್ರಸಾದ ವಿನಿಯೋಗ ಏರ್ಪಡಿಸಲಾಗಿತ್ತು.

ರಾತ್ರಿ, ಹಾಸನ ರಸ್ತೆಯಲ್ಲಿರುವ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಳಿ ಗಣಪತಿ ಉತ್ಸವ ಆಗಮಿಸಿದ ವೇಳೆ, ಅರಸೀಕೆರೆಯ ಹೆಸರಾಂತ ರಾಜ್ ಕಮಲ್ ಫೈರ್ ವರ್ಕ್ಸ್ ಮಾಲೀಕರಾದ ಎ.ಆರ್.ಶಂಕರಾಚಾರ್ ರವರಿಂದ ಬಣ್ಣಬಣ್ಣದ ಚಿತ್ತಾಕರ್ಶಕ ಮದ್ದುಗುಂಡುಗಳ ಪ್ರದರ್ಶನ ನಡೆಯಿತು




















Share:

ನಮ್ಮ ವೆಬ್ ಪುಟಗಳ ವೀಕ್ಷಣೆ ಸಂಖ್ಯೆ

ಅರಸೀಕೆರೆ.in ಆಂಡ್ರಾಯಿಡ್ ಮೊಬೈಲ್ ಆಪ್

ಅರಸೀಕೆರೆ.in ಇದೀಗ ಆಂಡ್ರಾಯಿಡ್ ಆಪ್‌ನಲ್ಲಿ

ಅರಸೀಕೆರೆಯ ಸುದ್ದಿಸಮಾಚಾರಗಳ ವೆಬ್ ಪುಟ www.arsikere.in ಇದೀಗ ಯಾವುದೇ ಬ್ರೌಸರ್ ಗಳ ಅವಶ್ಯಕತೆ ಇಲ್ಲದೇ ಆಂಡ್ರಾಯಿಡ್ ಆಪ್ ಮೂಲಕ  ಅತ್ಯಂತ ಸುಲಭವಾಗಿ ವೀಕ್ಷಿಸಬಹುದು....