ಬುಧವಾರ, ಡಿಸೆಂಬರ್ 12, 2018

ಅರಸೀಕೆರೆ ಬಳಿ ರಸ್ತೆ ಅಪಘಾತ 1 ಸಾವು

ಅರಸೀಕೆರೆ ಬಳಿ ರಸ್ತೆ ಅಪಘಾತ 1 ಸಾವು

ಅರಸೀಕೆರೆ ತಾಲ್ಲೂಕು ಕಸಬಾ ಹೋಬಳಿ ಹೊಸಕಲ್ಲನಾಯ್ಕನಹಳ್ಳಿ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ 206 ರಲ್ಲಿ ಇಂದು (12-12-2018) ಮುಂಜಾನೆ ಸುಮಾರು 7.30 ಗಂಟೆಯ ಸಮಯದಲ್ಲಿ ಫೋರ್ಡ್ ಐಕಾನ್ ಕಾರು ಮತ್ತು ಮಾರುತಿ ವ್ಯಾಗನಾರ್ ಕಾರಿನ ನಡುವೆ  ಸಂಭವಿಸಿದ ಮುಖಾಮುಖಿ ಅಪಘಾತದಲ್ಲಿ  ಒಬ್ಬರು ಮೃತಪಟ್ಟಿದ್ದು, ಎರಡು ಕಾರಿನಲ್ಲಿದ್ದ ಐದು ಜನರಿಗೆ ಗಾಯಗಳಾಗಿರುತ್ತದೆ.

ಶಿವಮೊಗ್ಗದಿಂದ ಚನ್ನರಾಯಪಟ್ಟಣಕ್ಕೆ ತೆರಳುತ್ತಿದ್ದ ಫೋರ್ಡ್ ಐಕಾನ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮಂಜುನಾಥಯ್ಯ (75) ಎಂಬುವರು ಅಪಘಾತದಲ್ಲಿ ಮೃತಪಟ್ಟಿರುತ್ತಾರೆ.  ಅವರ ಪತ್ನಿ ಜಯಶ್ರೀ (68) ರವರಿಗೆ, ವಾಹನ ಚಾಲನೆ ಮಾಡುತ್ತಿದ್ದ ಪುತ್ರ ಕಾರ್ತಿಕ್ (41) ರವರಿಗೆ ಗಾಯಗಳಾಗಿದ್ದು ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ಕಳಿಸಿಕೊಡಲಾಗಿದೆ.

ನಿಟ್ಟೂರಿನಿಂದ ಚಿಕ್ಕಮಗಳೂರಿಗೆ ತೆರಳುತ್ತಿದ್ದ ಮಾರುತಿ ವ್ಯಾಗನಾರ್ ಕಾರಿನಲ್ಲಿದ್ದ ರವಿ ಚೌಹಾನ್ (30) ಗೋಪಾಲ್ (32) ಮತ್ತು ಗುರು (28) ಇವರುಗಳಿಗೆ ಗಾಯಗಳಾಗಿದ್ದು ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ಕಳಿಸಲಾಗಿದೆ.

ಅರಸೀಕೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ  ದಾಖಲಾಗಿದೆ.

(ಚಿತ್ರ ಮಾಹಿತಿ : ಪೊಲೀಸ್ ಇಲಾಖೆ)





Share:

ನಮ್ಮ ವೆಬ್ ಪುಟಗಳ ವೀಕ್ಷಣೆ ಸಂಖ್ಯೆ

ಅರಸೀಕೆರೆ.in ಆಂಡ್ರಾಯಿಡ್ ಮೊಬೈಲ್ ಆಪ್

ಅರಸೀಕೆರೆ.in ಇದೀಗ ಆಂಡ್ರಾಯಿಡ್ ಆಪ್‌ನಲ್ಲಿ

ಅರಸೀಕೆರೆಯ ಸುದ್ದಿಸಮಾಚಾರಗಳ ವೆಬ್ ಪುಟ www.arsikere.in ಇದೀಗ ಯಾವುದೇ ಬ್ರೌಸರ್ ಗಳ ಅವಶ್ಯಕತೆ ಇಲ್ಲದೇ ಆಂಡ್ರಾಯಿಡ್ ಆಪ್ ಮೂಲಕ  ಅತ್ಯಂತ ಸುಲಭವಾಗಿ ವೀಕ್ಷಿಸಬಹುದು....