ಮಂಗಳವಾರ, ಡಿಸೆಂಬರ್ 18, 2018

ಅರಸೀಕೆರೆ ಮಾಲೇಕಲ್ಲು ತಿರುಪತಿಯಲ್ಲಿ ವೈಭವದ ವೈಕುಂಠ ಏಕಾದಶಿ

ವೈಕುಂಠ ಏಕಾದಶಿ

ಅರಸೀಕೆರೆ ಮಾಲೇಕಲ್ಲು ತಿರುಪತಿ ಶ್ರೀ ಲಕ್ಷ್ಮೀವೆಂಕಟರಮಣ ಸ್ವಾಮಿಯವರ ದೇವಸ್ಥಾನದಲ್ಲಿ ಇಂದು ವೈಕುಂಠ ಏಕಾದಶಿಯ ಪ್ರಯುಕ್ತ ಶ್ರೀ ಗೋವಿಂದರಾಜ ಸ್ವಾಮಿಯವರಿಗೆ ವಾಮನಾವತಾರದ ಅಲಂಕಾರ, ಮಹಾಲಕ್ಷ್ಮಿ ಅಮ್ಮನವರಿಗೆ ವಿಶೇಷ ಅಲಂಕಾರ, ವೈಕುಂಠ ದ್ವಾರದ ಮಂಟಪದಲ್ಲಿ ಶ್ರೀಯವರ ಉತ್ಸವ ಮೂರ್ತಿಗೆ ವೈಕುಂಠ ನಾರಾಯಣ ಅಲಂಕಾರ ಮಾಡಲಾಗಿತ್ತು. ಶ್ರೀ ಆಂಜನೇಯ ಸ್ವಾಮಿಗೆ ಹಾಗೂ  ಮಾಲೇಕಲ್ಲು ತಿರುಪತಿ ಬೆಟ್ಟದ ಮೇಲೆ ನೆಲೆಸಿರುವ ಶ್ರೀನಿವಾಸ ಸ್ವಾಮಿ ಮತ್ತು ಪದ್ಮಾವತಿ ಅಮ್ಮನವರಿಗೆ ವೈಕುಂಠ ಏಕಾದಶಿ ಪ್ರಯುಕ್ತ ವಿಶೇಷ ಅಲಂಕಾರ ಮಾಡಲಾಗಿತ್ತು. ಬೆಳಿಗ್ಗೆ ದೇವಸ್ಥಾನದಲ್ಲಿ  ಪ್ರಾತಃಕಾಲ ಶ್ರೀಯವರಿಗೆ ಹಾಗೂ ಅಮ್ಮನವರಿಗೆ ಅಭಿಷೇಕ ಹಾಗೂ ಪ್ರಾಕಾರದಲ್ಲಿ ಶ್ರೀಯವರ ಉತ್ಸವ ಜರುಗಿತು. ಸಾವಿರಾರು ಭಕ್ತರು ಸ್ವಾಮಿಯ ದರ್ಶನ ಪಡೆದುಕೊಂಡರು.  ಅರಸೀಕೆರೆಯ ವಿವಿಧ ಸಂಘ ಸಂಸ್ಥೆಗಳಿಂದ ದೇವಸ್ಥಾನದ ಆವರಣದಲ್ಲಿ ಭಕ್ತಿಗೀತೆ, ದೇವರನಾಮ, ಭಜನೆ ಕಾರ್ಯಕ್ರಮ ಜರುಗಿತು.

ದೇವಸ್ಥಾನಕ್ಕೆ ಆಗಮಿಸಿದ ಭಕ್ತರಿಗೆ ಕರವೇ ಅಧ್ಯಕ್ಷ ಟಿ.ಎ.ನಾರಾಯಣಗೌಡ ಮತ್ತು ಕುಟುಂಬದವರಿಂದ ಸಾಮೂಹಿಕ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.

ಹನೂರು ತಾಲ್ಲೂಕಿನ ಕಿಚ್ಚುಗುತ್ತಿ ಮಾರಮ್ಮ ವಿಷಾಹಾರ ದುರಂತ ಪ್ರಕರಣದ ಹಿನ್ನೆಲೆಯಲ್ಲಿ, ಅರಸೀಕೆರೆ ಮಾಲೇಕಲ್ಲು ತಿರುಪತಿಯಲ್ಲಿ ಇಂದು ವೈಕುಂಠ ಏಕಾದಶಿ ಪ್ರಯುಕ್ತ ಜರುಗುತ್ತಿರುವ ಅನ್ನಸಂತರ್ಪಣೆ ಪ್ರಾರಂಭಕ್ಕೆ ಮುಂಚಿತವಾಗಿ CFTRI ಸಿಬ್ಬಂದಿಗಳು ಆಹಾರ ಗುಣಮಟ್ಟ ಪರಿಶೀಲಿಸಿ, ಊಟದ ಸ್ಯಾಂಪಲ್ ಸಂಗ್ರಹಿಸಿದರು. ನಂತರ ಭಕ್ತಾಧಿಗಳಿಗೆ ಪ್ರಸಾದ ವಿತರಣೆ, ಅನ್ನಸಂತರ್ಪಣೆ ನೆರವೇರಿತು.















Share:

ನಮ್ಮ ವೆಬ್ ಪುಟಗಳ ವೀಕ್ಷಣೆ ಸಂಖ್ಯೆ

ಅರಸೀಕೆರೆ.in ಆಂಡ್ರಾಯಿಡ್ ಮೊಬೈಲ್ ಆಪ್

ಅರಸೀಕೆರೆ.in ಇದೀಗ ಆಂಡ್ರಾಯಿಡ್ ಆಪ್‌ನಲ್ಲಿ

ಅರಸೀಕೆರೆಯ ಸುದ್ದಿಸಮಾಚಾರಗಳ ವೆಬ್ ಪುಟ www.arsikere.in ಇದೀಗ ಯಾವುದೇ ಬ್ರೌಸರ್ ಗಳ ಅವಶ್ಯಕತೆ ಇಲ್ಲದೇ ಆಂಡ್ರಾಯಿಡ್ ಆಪ್ ಮೂಲಕ  ಅತ್ಯಂತ ಸುಲಭವಾಗಿ ವೀಕ್ಷಿಸಬಹುದು....