ಗುರುವಾರ, ಡಿಸೆಂಬರ್ 13, 2018

ವೈಕುಂಠ ಏಕಾದಶಿ ಕಾರ್ಯಕ್ರಮಕ್ಕೆ ಆಹ್ವಾನ

"ವೈಕುಂಠ ಏಕಾದಶಿ"

ದಿನಾಂಕ 18-12-2018, ಮಂಗಳವಾರದಂದು "ವೈಕುಂಠ ಏಕಾದಶಿ" ಪ್ರಯುಕ್ತ ಅರಸೀಕೆರೆ ಮಾಲೇಕಲ್ಲು ತಿರುಪತಿ ಶ್ರೀ ಲಕ್ಷ್ಮೀವೆಂಕಟರಮಣ ಸ್ವಾಮಿಯವರ ದೇವಸ್ಥಾನದಲ್ಲಿ ಪ್ರಾತಃಕಾಲ ಶ್ರೀಯವರಿಗೆ ಹಾಗೂ ಅಮ್ಮನವರಿಗೆ ಅಭಿಷೇಕ, ನಂತರ ವಿಶೇಷ ಅಲಂಕಾರ ಹಾಗೂ ತೀರ್ಥಪ್ರಸಾದ ವಿನಿಯೋಗವಿರುತ್ತದೆ.

ಬೆಳಿಗ್ಗೆ 7.30 ರಿಂದ ಸಂಜೆ 6.30 ರ ವರೆಗೆ ದೇವಸ್ಥಾನದ ವೈಕುಂಠ ದ್ವಾರದಲ್ಲಿ ನಿರ್ಮಿಸಿರುವ ಮಂಟಪದಲ್ಲಿ ಶ್ರೀ ಲಕ್ಷ್ಮೀವೆಂಕಟರಮಣ ಸ್ವಾಮಿಯವರ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಿ ಶ್ರೀಯವರಿಗೆ ವಿಶೇಷ ಅಲಂಕಾರವನ್ನು ಏರ್ಪಡಿಸಲಾಗುವುದು.

ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡ ರವರ ವತಿಯಿಂದ ದೇವಸ್ಥಾನಕ್ಕೆ ಹೂವಿನ ವಿಶೇಷ ಅಲಂಕಾರ ಹಾಗೂ ಭಕ್ತಾಧಿಗಳಿಗೆ ಸಾಮೂಹಿಕ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ.  ಅನ್ನ ಸಂತರ್ಪಣೆಗಾಗಿ ತಿರುಪತಿಯಲ್ಲಿರುವ ಆರ್ಯವೈಶ್ಯ ಕಲ್ಯಾಣ ಮಂದಿರವನ್ನು ಮಂಡಲಿಯ ವತಿಯಿಂದ ಉಚಿತವಾಗಿ ನೀಡಲಾಗಿರುತ್ತದೆ.

ಬೆಳಿಗ್ಗೆ 10 ಗಂಟೆಯಿಂದ ಸಂಜೆ 6.30ರ ವರೆಗೆ ಅರಸೀಕೆರೆಯ ವಿವಿಧ ಸಂಘ ಸಂಸ್ಥೆಗಳಿಂದ ದೇವಸ್ಥಾನದ ಆವರಣದಲ್ಲಿ ಭಕ್ತಿಗೀತೆ, ದೇವರನಾಮ, ಭಜನೆ ಕಾರ್ಯಕ್ರಮ ಜರುಗಲಿದೆ.

ಅರಸೀಕೆರೆ ಬಸ್ ನಿಲ್ದಾಣದಿಂದ ಬೆಳಿಗ್ಗೆ 7 ಗಂಟೆಯಿಂದ ಸಂಜೆ 8 ಗಂಟೆಯವರೆಗೆ ಮಾಲೇಕಲ್ಲು ತಿರುಪತಿಗೆ ರಾಜ್ಯ ರಸ್ತೆ ಸಾರಿಗೆ ಬಸ್ಸುಗಳ ಸಂಚಾರ ವ್ಯವಸ್ಥೆ ಇರುತ್ತದೆ.


Share:

ನಮ್ಮ ವೆಬ್ ಪುಟಗಳ ವೀಕ್ಷಣೆ ಸಂಖ್ಯೆ

ಅರಸೀಕೆರೆ.in ಆಂಡ್ರಾಯಿಡ್ ಮೊಬೈಲ್ ಆಪ್

ಅರಸೀಕೆರೆ.in ಇದೀಗ ಆಂಡ್ರಾಯಿಡ್ ಆಪ್‌ನಲ್ಲಿ

ಅರಸೀಕೆರೆಯ ಸುದ್ದಿಸಮಾಚಾರಗಳ ವೆಬ್ ಪುಟ www.arsikere.in ಇದೀಗ ಯಾವುದೇ ಬ್ರೌಸರ್ ಗಳ ಅವಶ್ಯಕತೆ ಇಲ್ಲದೇ ಆಂಡ್ರಾಯಿಡ್ ಆಪ್ ಮೂಲಕ  ಅತ್ಯಂತ ಸುಲಭವಾಗಿ ವೀಕ್ಷಿಸಬಹುದು....