ಶುಕ್ರವಾರ, ಮಾರ್ಚ್ 10, 2017

ಅರಸೀಕೆರೆಯಲ್ಲಿ ವಿವಿಧ ಕಾಮಗಾರಿಗಳ ಭೂಮಿಪೂಜೆ

ಅರಸೀಕೆರೆ ನಗರಸಭೆ ವ್ಯಾಪ್ತಿಯಲ್ಲಿ ಎತ್ತಿನಹೊಳೆ ಇಲಾಖೆಯ ಎಸ್.ಸಿ.ಪಿ ಯೋಜನೆಯಡಿ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಶಾಸಕ ಕೆ.ಎಂ.ಶಿವಲಿಂಗೇಗೌಡ ಭೂಮಿ ಪೂಜೆ ನೆರವೇರಿಸಿದರು, ನಗರಸಭಾ ಅಧ್ಯಕ್ಷ ಸಮಿಉಲ್ಲಾ, ಉಪಾಧ್ಯಕ್ಷ ಪಾರ್ಥಸಾರಥಿ, ನಗರಸಭೆ ಮಾಜಿ ಅಧ್ಯಕ್ಷ ಮೋಹನ್ ಕುಮಾರ್ ಸದಸ್ಯರಾದ ಗೀತಾ, ನಾಮನಿರ್ದೇಶಿತ ಸದಸ್ಯ ಉಮಾಶಂಕರ್ ಇತರರು ಹಾಜರಿದ್ದರು.
1. ಈಡಿಗರ ಕಾಲೋನಿ-4.5 ಲಕ್ಷ.
2. ಬಿ.ಜಿ.ಹಟ್ಟಿ- 6.7ಲಕ್ಷ.
3. ಸುಭಾಷ ನಗರ17.75 ಲಕ್ಷ
4. ಅರಸೀಕೆರೆ ನಗರದ ಇಂದಿರಾನಗರಕ್ಕೆ 25ಲಕ್ಷ ಮತ್ತು ಬಾಬಾ ಸಾಬ್ ಕಾಲೋನಿಗೆ 25 ಲಕ್ಷ ವೆಚ್ಚದಲ್ಲಿ ಕೋಳಗೇರಿ ಮಂಡಳಿಯ ಮೂಲಭೂತ ಸೌಕರ್ಯವಾದ ಕಾಂಕ್ರೀಟು ರಸ್ತೆ ಮತ್ತು ಚರಂಡಿ ನಿರ್ಮಾಣ





Share:

ಗುರುವಾರ, ಮಾರ್ಚ್ 9, 2017

ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಪ್ರಾರಂಭ

ವಿದ್ಯಾರ್ಥಿ ಜೀವನದ ಎರಡನೇ ಪ್ರಮುಖ ಘಟ್ಟವಾದ ದ್ವಿತೀಯ ಪಿಯುಸಿ ಪರೀಕ್ಷೆಗಳು ಇಂದಿನಿಂದ ಪ್ರಾರಂಭಗೊಂಡಿತು.  ಅರಸೀಕೆರೆ ಪಟ್ಟಣದಲ್ಲಿ 5 ಹಾಗೂ ಜಾವಗಲ್ ಗ್ರಾಮದಲ್ಲಿ ಒಂದು ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಇಂದು ಪರೀಕ್ಷೆಯನ್ನು ಬರೆದರು. ಈ ಶೈಕ್ಷಣಿಕ ವರ್ಷದಲ್ಲಿ ಅರಸೀಕೆರೆ ತಾಲ್ಲೂಕಿನ ಒಟ್ಟು 2656 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಎದುರಿಸಲಿದ್ದಾರೆ.

ಕಳೆದ ವರ್ಷ ಪಿಯುಸಿ ಪರೀಕ್ಷೆಯಲ್ಲಿ ಉಂಟಾದ ರಾದ್ಧಾಂತಗಳನ್ನು ಗಣನೆಗೆ ತೆಗೆದುಕೊಂಡು, ಈ ವರ್ಷ ಪರೀಕ್ಷಾ ಕೇಂದ್ರಗಳಲ್ಲಿ ಅತ್ಯಂತ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಿದ್ದಾರೆ.  ಎಲ್ಲ ಕೊಠಡಿಗಳಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಸಿದ್ದು, ಯಾವುದೇ ರೀತಿಯ ಅಕ್ರಮಗಳು ನಡೆಯದಂತೆ ಹದ್ದಿನ ಕಣ್ಣಿಟ್ಟಿದ್ದಾರೆ.

ಚಿತ್ರ : ಅರಸೀಕೆರೆ ಪಟ್ಟಣದ ಕೋಡಿಮಠ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳು.



Share:

ಅಪರಿಚಿತ ವಾಹನಕ್ಕೆ ಬಲಿಯಾದ ಜಿಂಕೆ

ಅರಸೀಕೆರೆ ತಾಲ್ಲೂಕಿನ ಜಾಜೂರು ಸಸ್ಯಕ್ಷೇತ್ರದ ಬಳಿ ಗುರುವಾರ ಮುಂಜಾನೆ ಮೇವು ಅರಸುತ್ತಾ ಬಂದಿದ್ದ ಜಿಂಕೆಯೊಂದು ರಾಷ್ಟ್ರೀಯ ಹೆದ್ದಾರಿ 206ನ್ನು ದಾಟುತ್ತಿದ್ದವೇಳೆ ಅಪರಿಚಿತ ವಾಹನವೊಂದು ಡಿಕ್ಕಿಹೊಡೆದ ಪರಿಣಾಮ ತೀವ್ರವಾಗಿ ಗಾಯಗೊಂಡಿತ್ತು.  ರಸ್ತೆಬದಿಯಲ್ಲಿ ಗಾಯಗೊಂಡು ಒದ್ದಾಡುತ್ತಿದ್ದ ಜಿಂಕೆಯನ್ನು ಕಂಡ ಸಮೀಪದ ಕೆಫೆ ಕಾಫಿ ಡೇ ಕಾರ್ಮಿಕರು ಆ ಜಿಂಕೆಗೆ ನೀರು ಕುಡಿಸಿ ಆರೈಕೆ ಮಾಡಿ, ತಕ್ಷಣವೇ ಅರಣ್ಯಾಧಿಕಾರಿಗಳಿಗೆ ವಿಷಯ ತಿಳಿಸಿದರು.  ಅಧಿಕಾರಿಗಳು ಸ್ಥಳಕ್ಕೆ ಆಗಮಿಸುವಷ್ಟರಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಜಿಂಕೆ ಮೃತಪಟ್ಟಿತ್ತು.  ಜಿಂಕೆಯ ಕಳೇಬರವನ್ನು ಜಾಜೂರು ಸಸ್ಯಕ್ಷೇತ್ರದಲ್ಲಿ ಅಂತ್ಯಸಂಸ್ಕಾರ ಮಾಡಲಾಯಿತು.

ಚಿತ್ರಕೃಪೆ : ಪೊಲೀಸ್ ಇಲಾಖೆ

Share:

ಅಂದು "ಸಂಗೊಳ್ಳಿ ರಾಯಣ್ಣ", ಇಂದು "ಹೆಬ್ಬುಲಿ"

ಸವಿಸವಿ ನೆನಪು.
ಅರಸೀಕೆರೆ ಸಾಧನಾ ಚಿತ್ರಮಂದಿರಲ್ಲಿ ಅಂದು-ಇಂದು.


Share:

ಬುಧವಾರ, ಮಾರ್ಚ್ 8, 2017

ಅರಸೀಕೆರೆಯಲ್ಲಿ ಕಿಚ್ಚ ಸುದೀಪ್

ಹೆಬ್ಬುಲಿ ಚಿತ್ರದ ಪ್ರಚಾರಕ್ಕಾಗಿ ಚಿತ್ರನಟ ಸುದೀಪ್ ರವರು ಇಂದು ಮಧ್ಯಾನ್ಹ ಅರಸೀಕೆರೆ ಪಟ್ಟಣಕ್ಕೆ ಆಗಮಿಸಿದ್ದರು.  ಪಟ್ಟಣದ ಸಾಧನಾ ಚಿತ್ರಮಂದಿರದಲ್ಲಿ ಅಭಿಮಾನಿಗಳನ್ನುದ್ದೇಶಿಸಿ ಮಾತನಾಡಿದರು.







Share:

ಈ ವಾರದ ಜನಪ್ರಿಯ ಪೋಸ್ಟ್‌ಗಳು

ನಮ್ಮ ವೆಬ್ ಪುಟಗಳ ವೀಕ್ಷಣೆ ಸಂಖ್ಯೆ

ಅರಸೀಕೆರೆ.in ಆಂಡ್ರಾಯಿಡ್ ಮೊಬೈಲ್ ಆಪ್

ಅರಸೀಕೆರೆ.in ಇದೀಗ ಆಂಡ್ರಾಯಿಡ್ ಆಪ್‌ನಲ್ಲಿ

ಅರಸೀಕೆರೆಯ ಸುದ್ದಿಸಮಾಚಾರಗಳ ವೆಬ್ ಪುಟ www.arsikere.in ಇದೀಗ ಯಾವುದೇ ಬ್ರೌಸರ್ ಗಳ ಅವಶ್ಯಕತೆ ಇಲ್ಲದೇ ಆಂಡ್ರಾಯಿಡ್ ಆಪ್ ಮೂಲಕ  ಅತ್ಯಂತ ಸುಲಭವಾಗಿ ವೀಕ್ಷಿಸಬಹುದು....