ಶನಿವಾರ, ಫೆಬ್ರವರಿ 18, 2017

ಮಹಾತ್ಮಗಾಂಧಿ ಚಿತಾಭಸ್ಮ ಸಮಾಧಿಗೆ ಮುಖ್ಯಮಂತ್ರಿಗಳಿಂದ ಪುಷ್ಪನಮನ

ಮಹಾತ್ಮಗಾಂಧಿ ಚಿತಾಭಸ್ಮ ಸಮಾಧಿಗೆ ಮುಖ್ಯಮಂತ್ರಿಗಳಿಂದ ಪುಷ್ಪನಮನ
ಅರಸೀಕೆರೆ ತಾಲ್ಲೂಕಿನ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಿಲಾನ್ಯಾಸಗಳ ಕಾರ್ಯಕ್ರಮಕ್ಕೆ ಆಗಮಿಸಿದ್ದ ಕರ್ನಾಟಕ ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ.ಸಿದ್ದರಾಮಯ್ಯನವರು ಇಂದು ಬೆಳಿಗ್ಗೆ ಅರಸೀಕೆರೆ ಹೊರವಲಯದಲ್ಲಿರುವ ಕಸ್ತೂರಬಾ ಗಾಂಧಿ ರಾಷ್ಟ್ರೀಯ ಸ್ಮಾರಕದ ಆವರಣದಲ್ಲಿರುವ ಮಹಾತ್ಮ ಗಾಂಧೀಜಿಯವರ ಪವಿತ್ರ ಚಿತಾಭಸ್ಮ ಸಮಾಧಿಗೆ ಭೇಟಿ ನೀಡಿ ಪುಷ್ಪನಮನ ಸಲ್ಲಿಸಿದರು.  ನಂತರ ಕಸ್ತೂರಬಾ ಆಶ್ರಮದ ವಸತಿಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಮಕ್ಕಳೊಂದಿಗೆ ಮಾತುಕತೆ ನಡೆಸಿದರು.

ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ.ಎ.ಮಂಜು, ಅರಸೀಕೆರೆ ಶಾಸಕರಾದ ಶ್ರೀ.ಕೆ.ಎಂ.ಶಿವಲಿಂಗೇಗೌಡ, ವಿಧಾನಪರಿಷತ್ ಸದಸ್ಯರಾದ ಶ್ರೀ.ಗೋಪಾಲಸ್ವಾಮಿ ಸೇರಿದಂತೆ ಅನೇಕ ಗಣ್ಯರು ಹಾಜರಿದ್ದರು.



Share:

ನಮ್ಮ ವೆಬ್ ಪುಟಗಳ ವೀಕ್ಷಣೆ ಸಂಖ್ಯೆ

ಅರಸೀಕೆರೆ.in ಆಂಡ್ರಾಯಿಡ್ ಮೊಬೈಲ್ ಆಪ್

ಅರಸೀಕೆರೆ.in ಇದೀಗ ಆಂಡ್ರಾಯಿಡ್ ಆಪ್‌ನಲ್ಲಿ

ಅರಸೀಕೆರೆಯ ಸುದ್ದಿಸಮಾಚಾರಗಳ ವೆಬ್ ಪುಟ www.arsikere.in ಇದೀಗ ಯಾವುದೇ ಬ್ರೌಸರ್ ಗಳ ಅವಶ್ಯಕತೆ ಇಲ್ಲದೇ ಆಂಡ್ರಾಯಿಡ್ ಆಪ್ ಮೂಲಕ  ಅತ್ಯಂತ ಸುಲಭವಾಗಿ ವೀಕ್ಷಿಸಬಹುದು....