ಶಿಕ್ಷಣ ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ
ಶಿಕ್ಷಣ ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ

ಶುಕ್ರವಾರ, ಜನವರಿ 5, 2018

ಶಾಲಾ ಶತಮಾನೋತ್ಸವ

ಶಾಲಾ ಶತಮಾನೋತ್ಸವ ಸಮಾರಂಭ

ಅರಸೀಕೆರೆ ಪಟ್ಟಣದ ಬಿ.ಹೆಚ್.ರಸ್ತೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ (ರಾಮಣ್ಣ ಸ್ಕೂಲ್) ಇದೀಗ ಶತಮಾನೋತ್ಸವದ ಸಂಭ್ರಮ.

28 ಸೆಪ್ಟೆಂಬರ್ 1917 ರಂದು ಹಾಸನದ ಅಂದಿನ ಡೆಪ್ಯೂಟಿ ಕಮಿಷನರ್ ರವರಾಗಿದ್ದ ಜಿ.ವೆಂಕಟ ರಾವ್ Esq ರವರು ಶಾಲೆಯ ಪ್ರಾರಂಭೋತ್ಸವದ ಶಿಲಾನ್ಯಾಸವನ್ನು ನೆರವೇರಿಸಿದ್ದರು. ಈ ಶಾಲೆಯ ಕಟ್ಟಡವನ್ನು ಮರುಳಸಿದ್ದಪ್ಪ ಮತ್ತು ರುದ್ರಪ್ಪ ಎನ್ನುವರು ದಾನವಾಗಿ ನೀಡಿದ್ದರು ಎಂದು ತಿಳಿಸುವ ಶಿಲಾಫಲಕ ಇಂದಿಗೂ ಶಾಲೆಯ ಆವರಣದಲ್ಲಿದೆ.

Esq : ಕುರಿತು ಕಿರು ಮಾಹಿತಿ
ಅಂದಿನ ಬ್ರಿಟಿಷ್ ಆಳ್ವಿಕೆಯಲ್ಲಿ ಸರ್ಕಾರದ ಹಿರಿಯ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದವರಿಗೆ ಗೌರವ ಸೂಚಕವಾಗಿ Esq (Esquire) ಇಸ್ಕ್ವೈರ್ ಎಂಬ ಪದನಾಮ ಬಳಸಲಾಗುತ್ತಿತ್ತು.  ಈ ಪದನಾಮ ಹೊಂದಲು ಅವರು ಇಂಗ್ಲೇಂಡಿನ ಆಕ್ಸ್ ಫರ್ಡ್, ಕೇಂಬ್ರಿಂಜ್ ಅಥವಾ ಲಂಡನ್ ಯೂನಿವರ್ಸಿಟಿಗಳಲ್ಲಿ ವ್ಯಾಸಂಗ ಮಾಡಿರಬೇಕಿತ್ತು. ಇಲ್ಲವೇ ಲಂಡನ್ನಿನಲ್ಲಿ ಬ್ಯಾರಿಸ್ಟರ್ ಹುದ್ದೆಯಲ್ಲಿ ಕಾರ್ಯನಿರ್ವಹಿಸಬೇಕಿತ್ತು. 

ಅಂದರೆ, ಈ ಶಾಲೆಯ ಶಿಲಾನ್ಯಾಸವನ್ನು ಮಾಡಿದ್ದಂತಹ ವ್ಯಕ್ತಿ ಅಂದಿನ ಕಾಲಕ್ಕೆ ಅತ್ಯಂತ ಮೇಧಾವಿ ಹಾಗೂ ಪ್ರಭಾವಶಾಲಿ ವ್ಯಕ್ತಿಯೇ ಆಗಿದ್ದರು.  ಬ್ರಿಟಿಷರ ಆಳ್ವಿಕೆಯ ಸಮಯದಲ್ಲೇ ಹಾಸನ ಜಿಲ್ಲೆಯ ಡೆಪ್ಯೂಟಿ ಕಮಿಷನ್ ಆಗಿದ್ದರು ಎಂದರೆ ಅವತ್ತಿನ ಅವರ ವರ್ಚಸ್ಸು ಹೇಗಿರಬಹುದೆಂದು ಊಹಿಸಿಕೊಳ್ಳಬಹುದು.  ಇಂತಹ ಘನತೆವೆತ್ತ ವ್ಯಕ್ತಿಯಿಂದ ಪ್ರಾರಂಭಗೊಂಡ ಶಾಲೆಯು ಇಂದು ಶತಮಾನದ ಸಂಭ್ರಮಕ್ಕೆ ಅಣಿಯಾಗಿದೆ.

ಕಳೆದ ಒಂದು ನೂರು ವರ್ಷಗಳಲ್ಲಿ ಸಾವಿರಾರು ವಿದ್ಯಾರ್ಥಿಗಳು ಈ ಶಾಲೆಯಲ್ಲಿ ವ್ಯಾಸಂಗ ಮಾಡಿದ್ದಾರೆ.  ಇವರೆಲ್ಲರೂ ಸಂಭ್ರಮಿಸುವ ಸಂದರ್ಭ ಇದೀಗ ಬಂದಿದೆ.

ದಿನಾಂಕ 06-01-2018, ಶನಿವಾರ, ಅಂದರೆ ನಾಳೆ ಸಂಜೆ 4 ಗಂಟೆಗೆ ಶಾಲೆಯ ಆವರಣದಲ್ಲಿ ಶತಮಾನೋತ್ಸವ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.  ಕಾರ್ಯಕ್ರಮದಲ್ಲಿ ಭಾರತದ ಮಾಜಿ ಪ್ರಧಾನಮಂತ್ರಿಗಳಾದ ಶ್ರೀ.ಹೆಚ್.ಡಿ.ದೇವೇಗೌಡರು, ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ. ಎ.ಮಂಜುರವರು, ಅರಸೀಕೆರೆ ಕ್ಷೇತ್ರದ ಶಾಸಕರಾದ ಶ್ರೀ. ಕೆ.ಎಂ.ಶಿವಲಿಂಗೇಗೌಡರು ಸೇರಿದಂತೆ ಅನೇಕ ಗಣ್ಯವ್ಯಕ್ತಿಗಳು ಮತ್ತು ಈ ಶಾಲೆಯಲ್ಲಿ ವ್ಯಾಸಂಗ ಮಾಡಿದಂತಹ ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ.

ಖಾಸಗಿ ಶಾಲೆಗಳ ಅಬ್ಬರದಲ್ಲಿ ಇಂದಿಗೂ ಉತ್ತಮ ವಿದ್ಯಾರ್ಥಿಗಳ ಸಂಖ್ಯೆಯನ್ನು ಹೊಂದಿ, ಶತಮಾನ ಪೂರೈಸಿದ ನಮ್ಮೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಸಮಾರಂಭಕ್ಕೆ ತಮ್ಮೆಲ್ಲರಿಗೂ ಆತ್ಮೀಯ ಸ್ವಾಗತ.

ವಂದನೆಗಳೊಂದಿಗೆ,

ಇದೇ ಶಾಲೆಯಲ್ಲಿ 1982 ರಿಂದ 1989 ರವರೆಗೆ ವ್ಯಾಸಂಗ ಮಾಡಿದ ಹೆಮ್ಮೆಯ ವಿದ್ಯಾರ್ಥಿ

ಶ್ರೀರಾಮ ಜಮದಗ್ನಿ
ಅರಸೀಕೆರೆ.









Share:

ಬುಧವಾರ, ಆಗಸ್ಟ್ 9, 2017

ಅರಸೀಕೆರೆ ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

Arsikere


ಶಾಲಾ ಕಾಲೇಜು ವ್ಯಾಸಂಗಕ್ಕೆ ಬೇರೆ ಬೇರೆ ಊರುಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ಬಸ್ ಪಾಸ್ ಹೊಂದಿದ್ದಾರೆ ಎಂಬ ಕಾರಣಕ್ಕೆ ಕೆಲ ಬಸ್ಸಿನಲ್ಲಿ ಹತ್ತಲು ಅವಕಾಶ ನೀಡುತ್ತಿಲ್ಲವಾದ್ದರಿಂದ, ಮತ್ತು ಶಾಲಾ ಕಾಲೇಜು ಪ್ರಾರಂಭದ ಸಮಯಕ್ಕೆ ತಲುಪುವಂತೆ ಬಸ್ಸುಗಳ ವೇಳಾಪಟ್ಟಿಯನ್ನು ಬದಲಾಯಿಸುವಂತೆ ಆಗ್ರಹಿಸಿ ಇಂದು ಬೆಳಿಗ್ಗೆ ಅರಸೀಕೆರೆ ಪಟ್ಟಣದ ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿಗಳು ಧಿಡೀರ್ ಪ್ರತಿಭಟನೆ ನಡೆಸಿದರು.  ಇದರಿಂದಾಗಿ ಪಟ್ಟಣದಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು.  ಸಾರಿಗೆ ಇಲಾಖೆಯ ಅಧಿಕಾರಿಗಳು, ವಿದ್ಯಾರ್ಥಿಗಳ ಬೇಡಿಕೆಗಳನ್ನು ಶೀಘ್ರವಾಗಿ ಈಡೇರಿಸುವುದಾಗಿ ಭರವಸೆ ನೀಡಿದ ನಂತರ ಪ್ರತಿಭಟನೆಯನ್ನು ನಿಲ್ಲಿಸಲಾಯಿತು. ಅರಸೀಕೆರೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಒಂದು ಕಿಲೋಮೀಟರ್ ವರೆಗೂ ವಾಹನ ಸಂಚಾರಕ್ಕೆ ತಡೆಯುಂಟಾಗಿತ್ತು.


ಚಿತ್ರ ಮಾಹಿತಿ : ಪೋಲೀಸ್ ಇಲಾಖೆ



Share:

ಶನಿವಾರ, ಜೂನ್ 10, 2017

ಅರಸೀಕೆರೆ ತಾಲ್ಲೂಕಿನಲ್ಲಿ ವಸತಿಶಾಲೆ ಪ್ರಾರಂಭ

Arsikere


ಪ್ರಸಕ್ತ ವರ್ಷದಲ್ಲಿ ಅರಸೀಕೆರೆ ಕ್ಷೇತ್ರಕ್ಕೆ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ, ಕರ್ನಾಟಕ ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಎರಡು ವಸತಿ ಶಿಕ್ಷಣ ಶಾಲೆಗಳನ್ನು ನಗರದ ಖಾಸಗಿ ಕಟ್ಟಡದಲ್ಲಿ ಪ್ರಾರಂಭ ಮಾಡಲಾಯಿತು, ಶಾಸಕ ಕೆ.ಎಂ.ಶಿವಲಿಂಗೇಗೌಡ ಉದ್ಘಾಟನೆ ಮಾಡಿದರು, ತಾ.ಪಂ.ಅದ್ಯಕ್ಷೆ ಮಂಜುಳಾಬಾಯಿ, ಜಿ.ಪಂ‌.ಮಾಜಿ ಉಪಾಧ್ಯಕ್ಷ ಬಿಳಿಚೌಡಯ್ಯ, ಮುಖಂಡರಾದ ಗೀಜಿಹಳ್ಳಿ ಧರ್ಮಶೇಕರ್, ಯಳವಾರೆ ಕೇಶವಣ್ಣ,ನಾಗಣ್ಣ ಇತರರು ಹಾಜರಿದ್ದರು, ಪ್ರಭಾರಿ ಪ್ರಾಂಶುಪಾಲ ಜಯಪ್ರಕಾಶ್ ಇದ್ದರು, ಡಾ.ಬಿ.ಆರ್.ಅಂಬೇಡ್ಕರ್ ವಸತಿ  ಶಾಲೆ, ಬಾಗೇಶಪುರ ಇದನ್ನು ಸೇವಲಾಲ್ ಭವನ ಅರಸೀಕೇರೆ ಮತ್ತು ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆ ,ರಾಮೇನಹಳ್ಳಿ ಇದನ್ನು ಗಂಗಾಪರಮೇಶ್ವರಿ ಸಮುದಾಯ ಭವನದಲ್ಲಿ ತಾತ್ಕಾಲಿಕವಾಗಿ ಆರಂಭಿಸಲಾಗಿದೆ           

ಚಿತ್ರ ಮಾಹಿತಿ : ಲಕ್ಷ್ಮೀಶ್ ಬಾಬು
ಅರಸೀಕೆರೆ ತಾಲ್ಲೂಕಿನಲ್ಲಿ ಅಂಬೇಡ್ಕರ್ ವಸತಿಶಾಲೆ ಪ್ರಾರಂಭ

ಅರಸೀಕೆರೆ ತಾಲ್ಲೂಕಿನಲ್ಲಿ ಅಂಬೇಡ್ಕರ್ ವಸತಿಶಾಲೆ ಪ್ರಾರಂಭ

ಅರಸೀಕೆರೆ ತಾಲ್ಲೂಕಿನಲ್ಲಿ ಅಂಬೇಡ್ಕರ್ ವಸತಿಶಾಲೆ ಪ್ರಾರಂಭ

ಅರಸೀಕೆರೆ ತಾಲ್ಲೂಕಿನಲ್ಲಿ ಅಂಬೇಡ್ಕರ್ ವಸತಿಶಾಲೆ ಪ್ರಾರಂಭ

Share:

ಗುರುವಾರ, ಮಾರ್ಚ್ 9, 2017

ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಪ್ರಾರಂಭ

ವಿದ್ಯಾರ್ಥಿ ಜೀವನದ ಎರಡನೇ ಪ್ರಮುಖ ಘಟ್ಟವಾದ ದ್ವಿತೀಯ ಪಿಯುಸಿ ಪರೀಕ್ಷೆಗಳು ಇಂದಿನಿಂದ ಪ್ರಾರಂಭಗೊಂಡಿತು.  ಅರಸೀಕೆರೆ ಪಟ್ಟಣದಲ್ಲಿ 5 ಹಾಗೂ ಜಾವಗಲ್ ಗ್ರಾಮದಲ್ಲಿ ಒಂದು ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಇಂದು ಪರೀಕ್ಷೆಯನ್ನು ಬರೆದರು. ಈ ಶೈಕ್ಷಣಿಕ ವರ್ಷದಲ್ಲಿ ಅರಸೀಕೆರೆ ತಾಲ್ಲೂಕಿನ ಒಟ್ಟು 2656 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಎದುರಿಸಲಿದ್ದಾರೆ.

ಕಳೆದ ವರ್ಷ ಪಿಯುಸಿ ಪರೀಕ್ಷೆಯಲ್ಲಿ ಉಂಟಾದ ರಾದ್ಧಾಂತಗಳನ್ನು ಗಣನೆಗೆ ತೆಗೆದುಕೊಂಡು, ಈ ವರ್ಷ ಪರೀಕ್ಷಾ ಕೇಂದ್ರಗಳಲ್ಲಿ ಅತ್ಯಂತ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಿದ್ದಾರೆ.  ಎಲ್ಲ ಕೊಠಡಿಗಳಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಸಿದ್ದು, ಯಾವುದೇ ರೀತಿಯ ಅಕ್ರಮಗಳು ನಡೆಯದಂತೆ ಹದ್ದಿನ ಕಣ್ಣಿಟ್ಟಿದ್ದಾರೆ.

ಚಿತ್ರ : ಅರಸೀಕೆರೆ ಪಟ್ಟಣದ ಕೋಡಿಮಠ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳು.



Share:

ಈ ವಾರದ ಜನಪ್ರಿಯ ಪೋಸ್ಟ್‌ಗಳು

ನಮ್ಮ ವೆಬ್ ಪುಟಗಳ ವೀಕ್ಷಣೆ ಸಂಖ್ಯೆ

ಅರಸೀಕೆರೆ.in ಆಂಡ್ರಾಯಿಡ್ ಮೊಬೈಲ್ ಆಪ್

ಅರಸೀಕೆರೆ.in ಇದೀಗ ಆಂಡ್ರಾಯಿಡ್ ಆಪ್‌ನಲ್ಲಿ

ಅರಸೀಕೆರೆಯ ಸುದ್ದಿಸಮಾಚಾರಗಳ ವೆಬ್ ಪುಟ www.arsikere.in ಇದೀಗ ಯಾವುದೇ ಬ್ರೌಸರ್ ಗಳ ಅವಶ್ಯಕತೆ ಇಲ್ಲದೇ ಆಂಡ್ರಾಯಿಡ್ ಆಪ್ ಮೂಲಕ  ಅತ್ಯಂತ ಸುಲಭವಾಗಿ ವೀಕ್ಷಿಸಬಹುದು....